×
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮೈಸೂರು ಕೆಡಿಪಿ ಸಭೆಯ ಮುಖ್ಯಾಂಶಗಳು

 

ಮೈಸೂರು, ಆಗಸ್ಟ್ 29, 2023:

ಮೈಸೂರು ಕೆಡಿಪಿ ಸಭೆಯ ಮುಖ್ಯಾಂಶಗಳು

 

 

 

ಕೃಷಿ ಸಂಬಂಧಿ ನೀಡಿದ ಸೂಚನೆಗಳು:

ರೈತರಿಗೆ ಒಮ್ಮೆ ಬೀಜಗಳನ್ನು ಒದಗಿಸಿಬಿಟ್ಟರೆ ತಮ್ಮ ಜವಾಬ್ದಾರಿ ಮುಗಿಯಿತು ಎಂದು ಕೃಷಿ ಅಧಿಕಾರಿಗಳು ಕೈಕಟ್ಟಿ ಕುಳಿತುಕೊಳ್ಳಬಾರದು. ಯಾವುದೇ ಕಾರಣದಿಂದ ಬೆಳೆ ನಷ್ಟವಾದರೆ ಮತ್ತೊಂದು ಸುತ್ತು ಬೀಜ ವಿತರಣೆ ಮಾಡಬೇಕು. ಪರ್ಯಾಯ ಬೆಳೆ ಬೆಳೆಯಲು ಅಗತ್ಯವಾದ ತಿಳಿವಳಿಕೆ ಮತ್ತು ಸವಲತ್ತುಗಳನ್ನು ಒದಗಿಸಬೇಕು. ಇಡೀ ಜಿಲ್ಲೆಯಲ್ಲಿ ಎಲ್ಲೇ ಬೀಜ-ಗೊಬ್ಬರದ ಕೊರತೆ  ಬಗ್ಗೆ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. 

 

ಹಳ್ಳಿಗಳಿಗೆ ಹೋಗಿ ರೈತರ ಸಮಸ್ಯೆಗಳನ್ನು ಸಮಾಧಾನದಿಂದ ಕೇಳಿಸಿಕೊಳ್ಳಬೇಕು. ಬಳಿಕ ಸಮಸ್ಯೆ ಪರಿಹಾರ ಮಾಡಬೇಕು. ರೈತರ ಜತೆ ಗೌರವಯುತವಾಗಿ ನಡೆದುಕೊಳ್ಳಬೇಕು. ಕಚೇರಿಗೆ ಬರುವ ರೈತರ ಜತೆ ಆರೋಗ್ಯಕರವಾದ ನಡವಳಿಕೆ ಇಟ್ಟುಕೊಳ್ಳಬೇಕು. ರೈತ ಸಂಪರ್ಕ ಕೇಂದ್ರಗಳು ಇರುವುದೇ ರೈತರಿಗೆ ಮಾಹಿತಿ ಕೊಟ್ಟು ಸಹಕಾರ ಕೊಡುವುದಕ್ಕೆ. ರೈತರು ತಮ್ಮ ಅನುಭವದಿಂದಲೇ ಕೃಷಿಯಲ್ಲಿ ಪಳಗಿರುತ್ತಾರೆ. ಅಧಿಕಾರಿಗಳಿಗಿಂತ ಹೆಚ್ಚು ತಿಳಿವಳಿಕೆ ಹೊಂದಿದ್ದಾರೆ. ಆದ್ದರಿಂದ ರೈತರ ಮಾತು ಕೇಳಿಸಿಕೊಳ್ಳಬೇಕು, ಫೀಲ್ಡ್‌ ವಿಸಿಟ್‌ ಮಾಡಿ, ಡೈರಿ ಬರೆಯುವುದನ್ನು ರೂಢಿಕೊಳ್ಳಬೇಕು ಎಂದು ತಿಳಿಹೇಳಿದರು. 

ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕೃಷಿ ಅಧಿಕಾರಿಗಳು ಅವರಿಗೆ ಮಾನವೀಯವಾಗಿ ಸ್ಪಂದಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಉದಾರವಾಗಿ ವರ್ತಿಸಿ. ಸರ್ಕಾರ ಹಣ ಕೊಡತ್ತೆ. ತಡ ಮಾಡದೆ ಪರಿಹಾರ ಅವರಿಗೆ ತಲುಪಬೇಕು. ಅನಗತ್ಯ ತಡ ಮಾಡಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು. 

ಬೆಲೆ ನಷ್ಟ ಮತ್ತು ರೈತರ ಆತ್ಮಹತ್ಯೆಗಳ ಕುರಿತಾಗಿ ವಾಸ್ತವ ಸಂಗತಿಗಳು ಮತ್ತು ಕಾರಣಗಳನ್ನು ಪತ್ತೆ ಹಚ್ಚಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಆತ್ಮಹತ್ಯೆಗಳಾಗಿದ್ದರೆ ಅದನ್ನೂ ನಮೂದಿಸಬೇಕು. ಆತ್ಮಹತ್ಯೆ ಹಿಂದಿನ ನೈಜ ಸಂಗತಿಯನ್ನು ಸ್ಪಷ್ಟವಾಗಿ ಗುರುತಿಸಿ, ದಾಖಲಿಸಬೇಕು ಎನ್ನುವ ಸೂಚನೆ ನೀಡಲಾಯಿತು. 

ನೀರಾವರಿ ಇಲಾಖೆ: 

ನಮ್ಮ ರೈತರಿಗೆ ಅನ್ಯಾಯ ಮಾಡಿ ಕಾವೇರಿ ನೀರನ್ನು ತಮಿಳುನಾಡಿಗೆ ನೀರು ಕೊಡಬೇಕು ಎನ್ನುವ ಸೂಚನೆ ಯಾವ ಆದೇಶದಲ್ಲೂ ಇಲ್ಲ. ನಮ್ಮ ಬೆಳೆ ಮತ್ತು ಕುಡಿಯುವ ನೀರಿನ ರಕ್ಷಣೆ ಮಾಡಿಕೊಳ್ಳಬೇಕು. ಸಂಕಷ್ಟ ಪರಿಹಾರ ಸೂತ್ರ ಇನ್ನೂ ಸಿದ್ದಗೊಳ್ಳಬೇಕಿದೆ. 

ಕುಡಿಯುವ ನೀರಿಗೆ ಮತ್ತು ಕೃಷಿಗೆ ಅಗತ್ಯವಾದ ನೀರಿನ ಪ್ರಮಾಣ ಎಷ್ಟು? ನಮ್ಮಲ್ಲಿ ಸಂಗ್ರಹದಲ್ಲಿರುವ ನೀರಿನ ಪ್ರಮಾಣ ಎಷ್ಟು ಎನ್ನುವ ಕುರಿತಾಗಿ ವೈಜ್ಞಾನಿಕ ತಿಳಿವಳಿಕೆ ಮತ್ತು ಮಾಹಿತಿ ಸಿದ್ದವಿಟ್ಟುಕೊಂಡು ನಮ್ಮ ರೈತರ ಹಿತ ಕಾಪಾಡುವುದನ್ನೇ ಮೊದಲ ಆಧ್ಯತೆಯನ್ನಾಗಿ ಕ್ರಮ ವಹಿಸಲು ಸೂಚಿಸಲಾಯಿತು. 

ಎಂಜಿನಿಯರ್‌ಗಳು ನಾಲೆ ಮೇಲೆ ತಿರುಗಾಡಿ ನೀರು ಟೈಲ್‌ ಎಂಡ್‌ ವರೆಗೂ ತಲುಪುತ್ತಿದೆಯಾ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ನಾಲೆಗೆ ನೀರು ಬಿಡುವ ಮೊದಲು ಹೂಳು ತೆಗೆಯಬೇಕು. ನೀರು ಬಿಟ್ಟ ಬಳಿಕ ಹೂಳು ತೆಗೆಯಲು ಹೋಗಬಾರದು.

ನಾಲೆಗಳಿಗೆ ನೀರು ಬಿಡುವ ಮೊದಲೇ ಮೋಟಾರು ಪಂಪ್‌ಗಳನ್ನು ರಿಪೇರಿ ಮಾಡಿಸಬೇಕು.

ಪಶುಪಾಲನಾ ಇಲಾಖೆ:

 

 

 

 

 

• ಹಾಲು ಒಕ್ಕೂಟಗಳಿಗೆ ಮನಸೋ ಇಚ್ಚೆ ನೇಮಕ ಮಾಡಿಕೊಳ್ಳಬಾರದು. ಹೊರ ಗುತ್ತಿಗೆ ಎನ್ನುವುದನ್ನು ದಂಧೆ ಮಾಡಿಕೊಳ್ಳಬಾರದು. ಮೀಸಲಾತಿ ಮಾನದಂಡದಲ್ಲಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

 

ತೋಟಗಾರಿಕಾ ಇಲಾಖೆ:

 

 

 ಆರೋಗ್ಯ ಇಲಾಖೆ:

 

 

 

 

 

ನಗರಾಡಳಿತ:

 

 

 

ಶಿಕ್ಷಣ:

 

 

ಇಂಧನ ಇಲಾಖೆ:

 

 

 

ಕುಡಿಯುವ ನೀರು:

 

 

ಸಾರಿಗೆ ಇಲಾಖೆ:

 

 

ಸುಳ್ಳು ಸುದ್ದಿಗಳಿಗೆ ಬ್ರೇಕ್: 

 

 

 

 

 

 

ಆದಿವಾಸಿ:

ಆದಿವಾಸಿಗಳಿಗೆ ೪ ತಿಂಗಳಿಂದ ಆಹಾರ ನೀಡುತ್ತಿಲ್ಲ ಎನ್ನುವ ವರದಿಗೆ ಸಂಬಂಧಪಟ್ಟಂತೆ ಗರಂ ಆದ ಮುಖ್ಯಮಂತ್ರಿಗಳು ನಿಮಗೆ ಆರು ತಿಂಗಳು ಸಂಬಳ ನಿಲ್ಲಿಸಿದರೆ ಏನಾಗುತ್ತದೆ ಎನ್ನುವ ಪ್ರಜ್ಞೆ ಇದೆಯೇ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

 

ಕಾರಿನಲ್ಲಿ ಓಡಾಡುವವರು ಮಾಲೀಕರಲ್ಲ: ಬರಿಗಾಲಿನಲ್ಲಿ ಓಡಾಡುವವರು ನನ್ನ ಮಾಲೀಕರು:

ಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ, ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ?  ಹಾಗಾದರೆ ನೀವೆಲ್ಲಾ ಯಾಕೆ ಇದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು. 

ಜನರಿಗೆ ಅಧಿಕಾರಿ-ಸಿಬ್ಬಂದಿ ಕೈಗೆ ಸಿಗಬೇಕು. ಖಾತೆ ಮಾಡಿಸಿಕೊಳ್ಳಲು, ಜಾತಿ ಪ್ರಮಾಣ ಪತ್ರಕ್ಕೆ ಜನ ವಿಧಾನಸೌಧಕ್ಕೆ ಬರಬೇಕಾ ? ಜನರೇ ನಮ್ಮ ಮಾಲೀಕರು. ನಾವು ಜನಗಳ ಸೇವಕರು. ಜನರ ಹಣದಲ್ಲಿ ನಿಮಗೆ, ನಮಗೆ ಎಲ್ಲಾ ರೀತಿಯ ಸವಲತ್ತುಗಳು ಸಿಗುತ್ತಿವೆ. ಹೀಗಾಗಿ ಜನರನ್ನು ಸಣ್ಣ ಪುಟ್ಟ ಕೆಲಸಕ್ಕೆ ಸರ್ಕಾರಿ ಕಚೇರಿಗಳಿಗೆ ಅಲೆಸದಂತೆ ಕೆಲಸ ಮಾಡಬೇಕು. ಜನ ಸಣ್ಣ ಕೆಲಸಗಳಿಗೆ ವಿಧಾನಸೌಧಕ್ಕೆ ಬರುತ್ತಾರೆ ಎಂದರೆ, ನನ್ನನ್ನು ಹುಡುಕಿಕೊಂಡು ಬರುತ್ತಾರೆ ಎಂದರೆ ನೀವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದೇ ಅರ್ಥ. ಇದು ನಿಮಗೆ ಸರಿಯಾಗಿ ಅರ್ಥ ಮಾಡಿಕೊಳ್ಳದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು. 

ಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲೀಕರು. ಕಾರಿನಲ್ಲಿ ಓಡಾಡುವ ಅಧಿಕಾರಿಗಳು ಬರಿ ಗಾಲಿನಲ್ಲಿ ಬರುವವರನ್ನು ಗೌರವದಿಂದ ಕಾಣಬೇಕು. ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಿ ಕೊಡಬೇಕು ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು. 

ಮೊದಲು ನನ್ನ ಜಿಲ್ಲೆಯಲ್ಲಿ ಜಿಲ್ಲಾಡಳಿತ ಇನ್ನಷ್ಟು ಚುರುಕಾಗಬೇಕು. ನಿಯಮಬದ್ದವಾಗಿ, ಕಾಲ ಮಿತಿಯಲ್ಲಿ ಕೆಲಸ ಮಾಡದಿದ್ದರೆ ಅದನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನ ಯಾವ ನಿರೀಕ್ಷೆ ಇಟ್ಟುಕೊಂಡು ಸರ್ಕಾರವನ್ನು ಬದಲಾಯಿಸಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಿ. ಮೈಸೂರು ಜಿಲ್ಲೆ ಶಿಕ್ಷಣ ಸೂಚ್ಯಂಕದಲ್ಲಿ 16 ನೇ ಸ್ಥಾನದಲ್ಲಿದೆ ಎಂದರೆ ನಾಚಿಕೆಗೇಡು. ಇದನ್ನು ನಾನು ಸಹಿಸಲ್ಲ. ಶಿಕ್ಷಣ, ಆರೋಗ್ಯ ಸೂಚ್ಯಂಕ ಸೇರಿ ಎಲ್ಲಾ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಮೈಸೂರು ಮಾದರಿ ಜಿಲ್ಲೆಯಾಗಲೇಬೇಕು. ಆ ರೀತಿ ದಕ್ಷತೆ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಿ ಎಂದು ಎಲ್ಲಾ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. 

ಆರು ತಿಂಗಳ ಬಳಿಕ ಮತ್ತೆ ಕೆಡಿಪಿ ಸಭೆ ನಡೆಸುತ್ತೇನೆ. ಅಷ್ಟರೊಳಗೆ ಪರಿಸ್ಥಿತಿ ಸುಧಾರಿಸಬೇಕು. ಪ್ರಗತಿಯ ವೇಗ ಹೆಚ್ಚಾಗಬೇಕು. ಇಲ್ಲದಿದ್ದರೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹೊಣೆ ಮಾಡುತ್ತೇನೆ. ಪ್ರೀ ಮೆಚೂರ್ ಎನ್ನುವುದನ್ನೂ ನೋಡದೆ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು. 

ಮಳೆಯ ಅಭಾವ ಇರುವುದರಿಂದ ಜನರು, ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಹೆಚ್ಚಿನ ರೀತಿಯಲ್ಲಿ ಸ್ಪಂದಿಸಿ ಎಂದು ಸೂಚಿಸಿದರು. 

ಇನ್ಸ್ ಪೆಕ್ಟರ್ ಗಳ ಅರಿವಿಗೆ ಬಾರದಂತೆ ಅವರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯಲು ಸಾಧ್ಯವೇ ಇಲ್ಲ. ಈ ಬಗ್ಗೆ ಡಿಸಿಪಿ ಗಳು, ಎಸ್ ಪಿ ಗಳು ಎಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾದರೆ ನಿಮ್ಮನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.

**********

 

 

×
ABOUT DULT ORGANISATIONAL STRUCTURE PROJECTS